ರಾಜ್ಯ

ಸಿಎಂ ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ: ಆರ್‌.ಅಶೋಕ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ.ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಸವಾಲು ಹಾಕಿದರು.

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

2 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

15 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

15 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

15 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

15 hours ago