ರಾಜ್ಯ

ಸಿಎಂ ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ: ಆರ್‌.ಅಶೋಕ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ.ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಸವಾಲು ಹಾಕಿದರು.

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago