ಬೆಂಗಳೂರು: ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಕೆಪಿಎಸ್ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು. ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಹೇಳಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ.
ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.
ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು.
ಕೆಪಿಎಸ್ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು.
ಕೆಪಿಎಸ್ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ” ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…