ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್ಎಚ್ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟಿದ್ದರು. ಬಳಿಕ ಅಧಿಕಾರಕ್ಕೆ ಬಂದ ಮೇಲೆ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ವಾಗ್ದಾಳಿ ನಡೆಸಿದ್ದಾರೆ.
ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…