ರಾಜ್ಯ

ಕಾಂಗ್ರೆಸ್‌ ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ: ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ಈಗಿನ ನಕಲಿ ಗಾಂಧಿ ಕುಟುಂಬಕ್ಕಾಗಿ ಮತ್ತು ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸ್ವಾತಂತ್ರ್ಯ ದೊರಕಿತು, ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು. ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ? ಎಂದು ಕಿಡಿಕಾರಿದ್ದಾರೆ.

ಸ್ವಾತಂತ್ರ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು. ಆದರೆ ಸ್ವಾತಂತ್ರ್ಯ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು ‘ಗಾಂಧಿ ಭಾರತ’ ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಸಹ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯಕರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್‌ಗೂ ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್‌ಗೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.

ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

1 hour ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

1 hour ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

3 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago