ಬೆಂಗಳೂರು: ಕಾಂಗ್ರೆಸ್ ಸರ್ಕಾರ, ಈಗಿನ ನಕಲಿ ಗಾಂಧಿ ಕುಟುಂಬಕ್ಕಾಗಿ ಮತ್ತು ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಾತಂತ್ರ್ಯ ದೊರಕಿತು, ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು. ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ? ಎಂದು ಕಿಡಿಕಾರಿದ್ದಾರೆ.
ಸ್ವಾತಂತ್ರ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು. ಆದರೆ ಸ್ವಾತಂತ್ರ್ಯ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು ‘ಗಾಂಧಿ ಭಾರತ’ ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.
ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಹ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯಕರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್ಗೂ ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್ಗೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.
ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…