ರಾಜ್ಯ

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ? ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ! ಎಂದು ಹೇಳಿದ್ದಾರೆ.

ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ನಿಮ್ಮ ಸ್ವಾಭಿಮಾನಿ, ಅಲ್ಲ ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ರೈತರ ಕಷ್ಟ ಕೇಳಿ. ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬನ್ನಿ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗು ತಮ್ಮ ನಡುವೆ ಯಾವುದೇ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕನಸಿಗೆ ಮತ್ತೊಮ್ಮೆ ತಣ್ಣೀರೆರಚಿದ್ದಾರೆ. ಉಪಮುಖ್ಯಮಂತ್ರಿಗಳೇ, ತಮ್ಮ ಕನಸು ಕನಸಾಗಿಯೇ ಉಳಿಯುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಈಗಲಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

30 seconds ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

55 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago