ರಾಜ್ಯ

ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಆರ್‌.ಅಶೋಕ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು. ನಮ್ಮ ದೇಶದ ಕಾನೂನು ಇನ್ನು ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ? ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ! ಎಂದು ಹೇಳಿದ್ದಾರೆ.

ಫೆಂಗಲ್ ಚಂಡಮಾರುತದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ 70,000 ಎಕರೆ ಪ್ರದೇಶದಲ್ಲಿ ಭತ್ತ, ರಾಗಿ ಬೆಳೆಗಳು ನೆಲಕಚ್ಚಿವೆ. ಹುಲ್ಲು ಕೊಳೆತು ಜಾನುವಾರುಗಳ ಮೇವಿಗೂ ಕೊರತೆಯಾಗಿದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ನಿಮ್ಮ ಸ್ವಾಭಿಮಾನಿ, ಅಲ್ಲ ಜನಕಲ್ಯಾಣ ಸಮಾವೇಶದ ಕಿತ್ತಾಟದ ಮಧ್ಯದಲ್ಲಿ ಬಿಡುವು ಮಾಡಿಕೊಂಡು ಒಮ್ಮೆ ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ರೈತರ ಕಷ್ಟ ಕೇಳಿ. ಬೆಳೆ ನಷ್ಟ ಪರಿಹಾರ ಕೊಡಿಸುವ ಮೂಲಕ ಅನ್ನದಾತರ ನೆರವಿಗೆ ಬನ್ನಿ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗು ತಮ್ಮ ನಡುವೆ ಯಾವುದೇ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕನಸಿಗೆ ಮತ್ತೊಮ್ಮೆ ತಣ್ಣೀರೆರಚಿದ್ದಾರೆ. ಉಪಮುಖ್ಯಮಂತ್ರಿಗಳೇ, ತಮ್ಮ ಕನಸು ಕನಸಾಗಿಯೇ ಉಳಿಯುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಈಗಲಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago