ರಾಜ್ಯ

ಆಂಧ್ರ ಪ್ರದೇಶದಂತೆ ನಮ್ಮ ರಾಜ್ಯದಲ್ಲೂ ವಕ್ಫ್‌ ಮಂಡಳಿ ರದ್ದುಗೊಳಿಸಬೇಕು: ಆರ್‌.ಅಶೋಕ್‌

ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶ ವಕ್ಫ್‌ ಮಂಡಳಿಯನ್ನು ರದ್ದುಗೊಳಿಸಿದಂತೆ ನಮ್ಮ ರಾಜ್ಯದಲ್ಲೂ ರದ್ದತಿಯಾಗಬೇಕು ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಂಧ್ರಪ್ರದೇಶದಲ್ಲಿ ಎನ್‌ಡಿಎ ನೇತೃತ್ವದ ರಾಜ್ಯ ಸರ್ಕಾರ ವಕ್ಫ್‌ ಮಂಡಳಿಯನ್ನು ವಜಾಗೊಳಿಸಿ ದಿಟ್ಟ ನಿರ್ಧಾರ ಮಾಡಿರುವುದು ಸ್ವಾಗತಾರ್ಹವಾಗಿದೆ. ಈ ಕಾರಣಕ್ಕೆ ನಾನು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಪವನ್‌ ಕಲ್ಯಾಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಕ್ಫ್‌ ಮಂಡಳಿಯ ಪರಿಕಲ್ಪನೆಯೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಆಂಧ್ರಪ್ರದೇಶದ ರೀತಿ ವಕ್ಫ್‌ ಮಂಡಳಿಯನ್ನು ರದ್ದುಗೊಳಿಸಬೇಕು. ಈ ಮೂಲಕ ರೈತರು, ಮಠ-ಮಂದಿರಗಳು, ಜನಸಾಮಾನ್ಯರು ಹಾಗೂ ಸರ್ಕಾರಿ ಆಸ್ತಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆಗೆ ಶಾಶ್ವತ ಅಂತ್ಯ ಹಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

2 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

10 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

11 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

13 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

14 hours ago