ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ (R. Ashok) ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ:- ಕಾಂಗ್ರೇಸ್ ಪಕ್ಷದಿಂದ ಜನರ ಮೇಲೆ ತೆರಿಗೆ ದಾಳಿ: ಆರ್. ಅಶೋಕ್
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.
ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಎಂದು ಕೇಳಿದರು.
ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…