ರಾಜ್ಯ

ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.‌ಅಶೋಕ್‌ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ (R. Ashok) ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ:- ಕಾಂಗ್ರೇಸ್‌ ಪಕ್ಷದಿಂದ ಜನರ ಮೇಲೆ ತೆರಿಗೆ ದಾಳಿ: ಆರ್‌. ಅಶೋಕ್‌

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಎಂದು ಕೇಳಿದರು.

ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

52 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

54 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

56 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

58 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago