r ashok
ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿಯ ಕಾರ್ಡ್ ಬಳಸಿ ಪರಿಶಿಷ್ಟ ಸಮುದಾಯಗಳಿಗೆ, ಹಿಂದುಳಿದ ವರ್ಗಗಳಿಗೆ ಯಾಕೆ ಅಪಮಾನ ಮಾಡುತ್ತೀರಿ ಮುಖ್ಯಮಂತ್ರಿಗಳೇ?
ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ. ಸಾಕು ಮಾಡಿ ನಿಮ್ಮ ನಾಟಕ.
ದಶವಾರ್ಷಿಕ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ. ಈಗ ಮತ್ತೊಮ್ಮೆ ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ವಿನಾಕಾರಣ ದುಂದುವೆಚ್ಚ ಮಾಡಿ ಅಪವ್ಯಯ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…