ರಾಜ್ಯ

ಕಾಂಗ್ರೆಸ್‌ ಪಕ್ಷ ಗೂಂಡಾಗಿರಿ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು.

ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ. ನಾಯಿ ಬೊಗಳಿದರೆ ಸ್ವರ್ಗ ಹಾಳಾಗಲ್ಲ ಎಂಬುದು ಗಾದೆ ಮಾತು ಅಷ್ಟೆ. ಕಲಬುರ್ಗಿಯಲ್ಲಿ ಇದು ಹೊಸದಲ್ಲ. ಇದು ಪ್ರತಿ ದಿನದ ಕಾಯಕವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಇದರ ಹಿಂದೆ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರವನ್ನು ಯಾರು ನೀಡಿದ್ದಾರೆ? ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಪೊಲೀಸರು ಹಾಗೂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago