Categories: ರಾಜ್ಯ

ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು: ಆರ್.‌ಅಶೋಕ್‌

ಬೆಂಗಳೂರು: ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿ ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಾಪಸ್‌ ಪಡೆಯುವ ಬಗ್ಗೆ, ಸಿಂಧೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದನ್ನು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ. ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ, ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಟ್ವೀಟ್‌ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಭೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ ಎಂದರು

ಆಂದೋಲನ ಡೆಸ್ಕ್

Recent Posts

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

10 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

24 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

36 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

2 hours ago