ರಾಜ್ಯ

ಅಪ್ಪಂದಿರ ದಿನಾಚರಣೆ ಪ್ರಯುಕ್ತ ಹಾಡು ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ಅಪ್ಪನ ಪ್ರೀತಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಾಡು ಬರೆಯಲಾಗಿದೆ. ಇದರಲ್ಲಿ ನನ್ನ ಭಾವನೆಗಳನ್ನು ಕೂಡ ಬರೆದುಕೊಟ್ಟಿದ್ದೇನೆ. ಅದನ್ನು ಹಾಡಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಕೇಳಿ ಎಲ್ಲರೂ ಅಪ್ಪನ ಬಳಿ ಪ್ರೀತಿಯನ್ನು ಹಂಚಿಕೊಳ್ಳಿ. ಈ ಹಾಡನ್ನು ನನ್ನ ತಂದೆ ಸೇರಿದಂತೆ ಎಲ್ಲ ತಂದೆಯರಿಗಾಗಿ ಬರೆದಿದ್ದೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಅಪ್ಪಂದಿರ ದಿನಾಚರಣೆ ಪ್ರಯುಕ್ತ, ಜೆಎಸ್‌ಎಸ್‌ ಎಜುಕೇಶನ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ, “ನಿಜನಾಯಕ ಅಪ್ಪ” ಕನ್ನಡ ಭಾವ ಚಿತ್ರಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ತಂದೆ ಎಂದರೆ ಮನೆಯ ಆಧಾರಸ್ತಂಭ. ಸಂಸಾರದ ಗಾಡಿಯನ್ನು ಎಳೆಯುವ ಯೋಗಿ. ತಂದೆ ಇಡೀ ಸಂಸಾರವನ್ನು ನಿಭಾಯಿಸುತ್ತಾರೆ. ಮಕ್ಕಳು ಕೇಳುವ ಪಾಕೆಟ್‌ ಮನಿಯನ್ನು ಅಪ್ಪ ಕೊಡಲೇಬೇಕಾಗುತ್ತದೆ. ಹೆಂಡತಿಗೆ ಮನೆ ನಡೆಸಲು ಹಣ ನೀಡಲೇಬೇಕಾಗುತ್ತದೆ. ಇಡೀ ಸಂಸಾರವನ್ನು ನಡೆಸುವ ನಾವಿಕ, ಮನೆಯ ಕಾವಲುಗಾರನೇ ಅಪ್ಪ ಎಂದರು.

ಹಿಂದೆ ನಮ್ಮೂರಿನಲ್ಲಿ ಸ್ಥಳೀಯರ ನಡುವೆ ಜಗಳವಾಗಿತ್ತು. ಸ್ಥಳೀಯರು ನನ್ನನ್ನು ಕರೆಯಲು ಮನೆಗೆ ಬಂದಿದ್ದರು. ಆದರೆ ಅಪ್ಪ ನನ್ನನ್ನು ಹೊರಗೆ ಬಿಟ್ಟಿರಲಿಲ್ಲ. ಅಂದು ನಾನೇನಾದರೂ ಹೊರಗೆ ಹೋಗಿದ್ದರೆ, ಅವರ ಜೊತೆಗೆ ಸೇರಿ ಅಪರಾಧಿಯಾಗುತ್ತಿದ್ದೆ. ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದರೆ, ಯಾವುದೇ ತಪ್ಪು ಮಾಡದೆ ಬೆಳೆದಿದ್ದೇನೆ ಎಂದರೆ, ಅದಕ್ಕೆ ಅಪ್ಪನೇ ಕಾರಣ. ನನ್ನ ಅಪ್ಪ ಅಂದು ಮನೆಯ ಕಾವಲುಗಾರನಾಗಿದ್ದೇ ಕಾರಣ ಎಂದು ಸ್ಮರಿಸಿಕೊಂಡರು.

ತಾಯಿ ಜೀವ ಕೊಟ್ಟರೆ, ತಂದೆ ಜೀವನ ಕೊಡುತ್ತಾರೆ. ಜೀವನಪೂರ್ತಿ ಅಪ್ಪ ಮಕ್ಕಳಿಗಾಗಿ ಶ್ರಮಿಸುತ್ತಾರೆ. ಅಪ್ಪಂದಿರು ಮಕ್ಕಳ ಪ್ರೀತಿಗಾಗಿ ಮಾತ್ರ ಹಂಬಲಿಸುತ್ತಾರೆ. ಈ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಅಪ್ಪಂದಿರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ನಾನು ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ನಾನು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಬೇಕೆಂದು ಅಪ್ಪ ಬಯಸಿದ್ದರು. ನಾನೆಂದೂ ಅಧ್ಯಕ್ಷನಾಗಲೇ ಇಲ್ಲ. ನಾನು ಎಂಜಿನಿಯರ್‌ ಆಗಬೇಕೆಂದು ಕೂಡ ಅವರು ಬಯಸಿದ್ದರು. ಆದರೆ ನಾನು 27 ವರ್ಷದವನಾಗಿದ್ದಾಗಲೇ ಅಪ್ಪ ತೀರಿಕೊಂಡರು. ಅನೇಕರ ಅಪ್ಪ ಮಕ್ಕಳ ಜೊತೆಗೆ ಇದ್ದಾರೆ. ಆದರೆ ಮಕ್ಕಳು ಅಪ್ಪನನ್ನು ಇಷ್ಟಪಡುತ್ತೇನೆಂದು ಹೇಳುವುದೇ ಬಹಳ ಅಪರೂಪವಾಗಿದೆ. ಮನೆಯಲ್ಲಿ ಇರುವ ದೇವರೇ ತಾಯಿ ಮತ್ತು ತಂದೆ. ಆದರೆ ಅವರನ್ನು ಪೂಜಿಸುವ ಮನಸ್ಸು ಕೆಲವರಿಗೆ ಬರುವುದೇ ಇಲ್ಲ. ಆದರೆ ಅವರು ಕಲ್ಲಿನ ದೇವರಿಗೆ ಪೂಜೆ ಮಾಡುತ್ತಾರೆ. ಸತ್ತ ನಂತರ ಪೂಜೆ ಮಾಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಸಂವಿಧಾನ ರಕ್ಷಿಸಿದ್ರೆ, ದೇಶ ಸುಭದ್ರ : ಸಿಎಂ

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…

25 mins ago

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

1 hour ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

3 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

3 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

3 hours ago