ರಾಜ್ಯ

ಅಪ್ಪಂದಿರ ದಿನಾಚರಣೆ ಪ್ರಯುಕ್ತ ಹಾಡು ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ಅಪ್ಪನ ಪ್ರೀತಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಾಡು ಬರೆಯಲಾಗಿದೆ. ಇದರಲ್ಲಿ ನನ್ನ ಭಾವನೆಗಳನ್ನು ಕೂಡ ಬರೆದುಕೊಟ್ಟಿದ್ದೇನೆ. ಅದನ್ನು ಹಾಡಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಕೇಳಿ ಎಲ್ಲರೂ ಅಪ್ಪನ ಬಳಿ ಪ್ರೀತಿಯನ್ನು ಹಂಚಿಕೊಳ್ಳಿ. ಈ ಹಾಡನ್ನು ನನ್ನ ತಂದೆ ಸೇರಿದಂತೆ ಎಲ್ಲ ತಂದೆಯರಿಗಾಗಿ ಬರೆದಿದ್ದೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಅಪ್ಪಂದಿರ ದಿನಾಚರಣೆ ಪ್ರಯುಕ್ತ, ಜೆಎಸ್‌ಎಸ್‌ ಎಜುಕೇಶನ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ, “ನಿಜನಾಯಕ ಅಪ್ಪ” ಕನ್ನಡ ಭಾವ ಚಿತ್ರಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ತಂದೆ ಎಂದರೆ ಮನೆಯ ಆಧಾರಸ್ತಂಭ. ಸಂಸಾರದ ಗಾಡಿಯನ್ನು ಎಳೆಯುವ ಯೋಗಿ. ತಂದೆ ಇಡೀ ಸಂಸಾರವನ್ನು ನಿಭಾಯಿಸುತ್ತಾರೆ. ಮಕ್ಕಳು ಕೇಳುವ ಪಾಕೆಟ್‌ ಮನಿಯನ್ನು ಅಪ್ಪ ಕೊಡಲೇಬೇಕಾಗುತ್ತದೆ. ಹೆಂಡತಿಗೆ ಮನೆ ನಡೆಸಲು ಹಣ ನೀಡಲೇಬೇಕಾಗುತ್ತದೆ. ಇಡೀ ಸಂಸಾರವನ್ನು ನಡೆಸುವ ನಾವಿಕ, ಮನೆಯ ಕಾವಲುಗಾರನೇ ಅಪ್ಪ ಎಂದರು.

ಹಿಂದೆ ನಮ್ಮೂರಿನಲ್ಲಿ ಸ್ಥಳೀಯರ ನಡುವೆ ಜಗಳವಾಗಿತ್ತು. ಸ್ಥಳೀಯರು ನನ್ನನ್ನು ಕರೆಯಲು ಮನೆಗೆ ಬಂದಿದ್ದರು. ಆದರೆ ಅಪ್ಪ ನನ್ನನ್ನು ಹೊರಗೆ ಬಿಟ್ಟಿರಲಿಲ್ಲ. ಅಂದು ನಾನೇನಾದರೂ ಹೊರಗೆ ಹೋಗಿದ್ದರೆ, ಅವರ ಜೊತೆಗೆ ಸೇರಿ ಅಪರಾಧಿಯಾಗುತ್ತಿದ್ದೆ. ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದರೆ, ಯಾವುದೇ ತಪ್ಪು ಮಾಡದೆ ಬೆಳೆದಿದ್ದೇನೆ ಎಂದರೆ, ಅದಕ್ಕೆ ಅಪ್ಪನೇ ಕಾರಣ. ನನ್ನ ಅಪ್ಪ ಅಂದು ಮನೆಯ ಕಾವಲುಗಾರನಾಗಿದ್ದೇ ಕಾರಣ ಎಂದು ಸ್ಮರಿಸಿಕೊಂಡರು.

ತಾಯಿ ಜೀವ ಕೊಟ್ಟರೆ, ತಂದೆ ಜೀವನ ಕೊಡುತ್ತಾರೆ. ಜೀವನಪೂರ್ತಿ ಅಪ್ಪ ಮಕ್ಕಳಿಗಾಗಿ ಶ್ರಮಿಸುತ್ತಾರೆ. ಅಪ್ಪಂದಿರು ಮಕ್ಕಳ ಪ್ರೀತಿಗಾಗಿ ಮಾತ್ರ ಹಂಬಲಿಸುತ್ತಾರೆ. ಈ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಅಪ್ಪಂದಿರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ನಾನು ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ನಾನು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಬೇಕೆಂದು ಅಪ್ಪ ಬಯಸಿದ್ದರು. ನಾನೆಂದೂ ಅಧ್ಯಕ್ಷನಾಗಲೇ ಇಲ್ಲ. ನಾನು ಎಂಜಿನಿಯರ್‌ ಆಗಬೇಕೆಂದು ಕೂಡ ಅವರು ಬಯಸಿದ್ದರು. ಆದರೆ ನಾನು 27 ವರ್ಷದವನಾಗಿದ್ದಾಗಲೇ ಅಪ್ಪ ತೀರಿಕೊಂಡರು. ಅನೇಕರ ಅಪ್ಪ ಮಕ್ಕಳ ಜೊತೆಗೆ ಇದ್ದಾರೆ. ಆದರೆ ಮಕ್ಕಳು ಅಪ್ಪನನ್ನು ಇಷ್ಟಪಡುತ್ತೇನೆಂದು ಹೇಳುವುದೇ ಬಹಳ ಅಪರೂಪವಾಗಿದೆ. ಮನೆಯಲ್ಲಿ ಇರುವ ದೇವರೇ ತಾಯಿ ಮತ್ತು ತಂದೆ. ಆದರೆ ಅವರನ್ನು ಪೂಜಿಸುವ ಮನಸ್ಸು ಕೆಲವರಿಗೆ ಬರುವುದೇ ಇಲ್ಲ. ಆದರೆ ಅವರು ಕಲ್ಲಿನ ದೇವರಿಗೆ ಪೂಜೆ ಮಾಡುತ್ತಾರೆ. ಸತ್ತ ನಂತರ ಪೂಜೆ ಮಾಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

10 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

29 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

54 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

1 hour ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

2 hours ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago