ರಾಜ್ಯ

ಜಾತಿ ಸಮೀಕ್ಷೆಯಿಂದ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ : ಆರ್‌.ಅಶೋಕ ಆರೋಪ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್‌ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ ರೀತಿ ಮಾಡಲಾಗಿದೆ. ಯಾರಾದರೂ ಪಾಕಿಸ್ತಾನದವನು, ಸಂವಿಧಾನ ನಂಬಲ್ಲ ಎಂದು ಹೇಳಿದರೆ, ಅದನ್ನು ಹಾಗೆಯೇ ಬರೆದುಕೊಳ್ಳುತ್ತಾರೆಯೇ? ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ, ಅದರಲ್ಲಿ ಜಾತಿಗಳ ಹೆಸರನ್ನು ಏಕೆ ಉಲ್ಲೇಖಿಸುತ್ತಾರೆ? ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರ ಮಾರ್ಗದರ್ಶನದಲ್ಲಿ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂದರು.

ಇದನ್ನು ವಿರೋಧ ಮಾಡುತ್ತಿರುವ ಸಚಿವರು ರಾಜೀನಾಮೆ ಕೊಟ್ಟು ಬರಲಿ. ಕೇವಲ ಹೇಳಿಕೆ ಕೊಟ್ಟು ನಾಟಕವಾಡುವುದು ಬೇಡ. ಹೀಗೆ ಮಾಡಿದರೆ ಜಾತಿ ಸಮುದಾಯದವರು ಸಚಿವರನ್ನು ಕ್ಷಮಿಸುವುದಿಲ್ಲ. ಮತಾಂತರವನ್ನು ತಡೆಯುವುದು ಸರ್ಕಾರದ ಕೆಲಸ. ಆದರೆ ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಾಯೋಜಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಗಾಂಧಿ ಸಮುದಾಯಕ್ಕೆ ಸೇರಿಸುತ್ತಿದ್ದಾರೆ. ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮವನ್ನು ಮಲಿನ ಮಾಡಲು ಸಾಧ್ಯವಿಲ್ಲ ಎಂದರು.

ಕೇಂದ್ರ ಸರ್ಕಾರ ಈಗಾಗಲೇ ಜನಗಣತಿ ಹಾಗೂ ಜಾತಿ ಗಣತಿಗೆ ಸಿದ್ಧತೆ ನಡೆಸಿದೆ. ಇದು ಅಧಿಕೃತವಾಗಿದೆ. ರಾಜ್ಯ ಸರ್ಕಾರ ನಡೆಸುವ ಸಮೀಕ್ಷೆಗಳು ಅಧಿಕೃತವಲ್ಲ. ಇದನ್ನು ಮುಂದೆ ಬರುವ ಸರ್ಕಾರ ತಿರಸ್ಕರಿಸಬಹುದು. ಜನರು ಏನು ಹೇಳಿದರೂ ಬರೆಯಬಹುದು ಎಂದರೆ ಸರ್ಕಾರ ಇರುವುದು ಏಕೆ? ಇದು ಸಂವಿಧಾನಕ್ಕೆ ಅಪಚಾರವಾಗಿದೆ. ಇದು ಯಾವುದೇ ಜಾತಿಗಳಿಗೆ ನ್ಯಾಯ ಸಿಗುವ ಸಮೀಕ್ಷೆಯಲ್ಲ. ಲಿಂಗಾಯತ ಜಾತಿಯನ್ನು ಒಡೆಯಲು ಯತ್ನಿಸಿದವರು ಈಗ ಹಿಂದೂ ಧರ್ಮವನ್ನು ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

*ಕರ್ನಾಟಕ ಪ್ರಯೋಗ ಶಾಲೆ*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕರ್ನಾಟಕವನ್ನು ಪ್ರಯೋಗಶಾಲೆ ಮಾಡಲಾಗಿದೆ. ಈ ಪ್ರಯೋಗದಲ್ಲಿ ಹಿಂದೂ ಧರ್ಮವನ್ನು ಕುಗ್ಗಿಸುವ ಕೆಲಸ ಮಾಡಲಾಗಿದೆ. ದಸರಾದಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಹೀಗೆ ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಹಿಂದೆ ಮಾಡಿದ ಸಮೀಕ್ಷೆಯಲ್ಲಿ 150 ಕೋಟಿ ರೂ. ನುಂಗಲಾಗಿದೆ. ಈಗ ಮತ್ತೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ದೂರಿದರು.

ಚುನಾವಣಾ ಆಯೋಗವನ್ನು ಅವಹೇಳನ ಮಾಡುವುದು, ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದು ಮೊದಲಾದ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ಸಾಹಿತಿ ಭಾನು ಮುಷ್ತಾಕ್‌ ಅವರಿಗೆ ಯಾವ ಅರ್ಹತೆ ಇದೆಯೆಂದು ಚಾಮುಂಡೇಶ್ವರಿ ಪೂಜೆಗೆ ಕರೆಸಿದ್ದಾರೆ ಎಂದು ತಿಳಿದಿಲ್ಲ ಎಂದರು.

ಬೆಂಗಳೂರಿನಲ್ಲಿ ರಸ್ತೆಗಳು ಹಾಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಎಲ್ಲ ರಸ್ತೆಗಳನ್ನೂ ಡಾಂಬರೀಕರಣ ಮಾಡಬೇಕಿದೆ. ಗುಂಡಿ ಮುಚ್ಚಿ ಎನ್ನುವ ಬದಲು ಇಡೀ ರಸ್ತೆಯನ್ನು ದುರಸ್ತಿ ಮಾಡಬೇಕಿದೆ. 25 ಕೋಟಿ ರೂ. ಕೊಟ್ಟಿದ್ದೇನೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅದು ಬಿಬಿಎಂಪಿಗೆ ಬಂದು ಟೆಂಡರ್‌ ಆಗುವ ವೇಳೆಗೆ ಇನ್ನೂ ಒಂದು ವರ್ಷ ಆಗಲಿದೆ. ಆಗ ಮತ್ತೆ ಮಳೆ ಬಂದು ಗುಂಡಿ ಹೆಚ್ಚಲಿದೆ. ಜನರ ಕಣ್ಣು ಒರೆಸಲು ಈ ರೀತಿ ಹೇಳಿಕೆ ನೀಡುವುದು ಬೇಡ. ಇಡೀ ನಗರದಲ್ಲಿ ಸುಮಾರು 5 ಲಕ್ಷ ಗುಂಡಿಗಳಿವೆ. ಡಾಂಬರು ಹಾಕಿದ ಒಂದೇ ಗಂಟೆಯಲ್ಲಿ ಕಿತ್ತುಹೋಗುತ್ತದೆ. ಗುಂಡಿ ಮುಚ್ಚುವ ಬದಲು ರಸ್ತೆಯನ್ನು ಡಾಂಬರೀಕರಣ ಮಾಡುವುದು ಸೂಕ್ತ ಎಂದರು.

ಆಂದೋಲನ ಡೆಸ್ಕ್

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

14 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

15 mins ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

2 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

2 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

2 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

2 hours ago