ರಾಜ್ಯ

ಜಾತಿ ಸಮೀಕ್ಷೆಯಿಂದ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ : ಆರ್‌.ಅಶೋಕ ಆರೋಪ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್‌ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ ರೀತಿ ಮಾಡಲಾಗಿದೆ. ಯಾರಾದರೂ ಪಾಕಿಸ್ತಾನದವನು, ಸಂವಿಧಾನ ನಂಬಲ್ಲ ಎಂದು ಹೇಳಿದರೆ, ಅದನ್ನು ಹಾಗೆಯೇ ಬರೆದುಕೊಳ್ಳುತ್ತಾರೆಯೇ? ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ, ಅದರಲ್ಲಿ ಜಾತಿಗಳ ಹೆಸರನ್ನು ಏಕೆ ಉಲ್ಲೇಖಿಸುತ್ತಾರೆ? ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರ ಮಾರ್ಗದರ್ಶನದಲ್ಲಿ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂದರು.

ಇದನ್ನು ವಿರೋಧ ಮಾಡುತ್ತಿರುವ ಸಚಿವರು ರಾಜೀನಾಮೆ ಕೊಟ್ಟು ಬರಲಿ. ಕೇವಲ ಹೇಳಿಕೆ ಕೊಟ್ಟು ನಾಟಕವಾಡುವುದು ಬೇಡ. ಹೀಗೆ ಮಾಡಿದರೆ ಜಾತಿ ಸಮುದಾಯದವರು ಸಚಿವರನ್ನು ಕ್ಷಮಿಸುವುದಿಲ್ಲ. ಮತಾಂತರವನ್ನು ತಡೆಯುವುದು ಸರ್ಕಾರದ ಕೆಲಸ. ಆದರೆ ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಾಯೋಜಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಗಾಂಧಿ ಸಮುದಾಯಕ್ಕೆ ಸೇರಿಸುತ್ತಿದ್ದಾರೆ. ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮವನ್ನು ಮಲಿನ ಮಾಡಲು ಸಾಧ್ಯವಿಲ್ಲ ಎಂದರು.

ಕೇಂದ್ರ ಸರ್ಕಾರ ಈಗಾಗಲೇ ಜನಗಣತಿ ಹಾಗೂ ಜಾತಿ ಗಣತಿಗೆ ಸಿದ್ಧತೆ ನಡೆಸಿದೆ. ಇದು ಅಧಿಕೃತವಾಗಿದೆ. ರಾಜ್ಯ ಸರ್ಕಾರ ನಡೆಸುವ ಸಮೀಕ್ಷೆಗಳು ಅಧಿಕೃತವಲ್ಲ. ಇದನ್ನು ಮುಂದೆ ಬರುವ ಸರ್ಕಾರ ತಿರಸ್ಕರಿಸಬಹುದು. ಜನರು ಏನು ಹೇಳಿದರೂ ಬರೆಯಬಹುದು ಎಂದರೆ ಸರ್ಕಾರ ಇರುವುದು ಏಕೆ? ಇದು ಸಂವಿಧಾನಕ್ಕೆ ಅಪಚಾರವಾಗಿದೆ. ಇದು ಯಾವುದೇ ಜಾತಿಗಳಿಗೆ ನ್ಯಾಯ ಸಿಗುವ ಸಮೀಕ್ಷೆಯಲ್ಲ. ಲಿಂಗಾಯತ ಜಾತಿಯನ್ನು ಒಡೆಯಲು ಯತ್ನಿಸಿದವರು ಈಗ ಹಿಂದೂ ಧರ್ಮವನ್ನು ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

*ಕರ್ನಾಟಕ ಪ್ರಯೋಗ ಶಾಲೆ*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕರ್ನಾಟಕವನ್ನು ಪ್ರಯೋಗಶಾಲೆ ಮಾಡಲಾಗಿದೆ. ಈ ಪ್ರಯೋಗದಲ್ಲಿ ಹಿಂದೂ ಧರ್ಮವನ್ನು ಕುಗ್ಗಿಸುವ ಕೆಲಸ ಮಾಡಲಾಗಿದೆ. ದಸರಾದಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಹೀಗೆ ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಹಿಂದೆ ಮಾಡಿದ ಸಮೀಕ್ಷೆಯಲ್ಲಿ 150 ಕೋಟಿ ರೂ. ನುಂಗಲಾಗಿದೆ. ಈಗ ಮತ್ತೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ದೂರಿದರು.

ಚುನಾವಣಾ ಆಯೋಗವನ್ನು ಅವಹೇಳನ ಮಾಡುವುದು, ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದು ಮೊದಲಾದ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ಸಾಹಿತಿ ಭಾನು ಮುಷ್ತಾಕ್‌ ಅವರಿಗೆ ಯಾವ ಅರ್ಹತೆ ಇದೆಯೆಂದು ಚಾಮುಂಡೇಶ್ವರಿ ಪೂಜೆಗೆ ಕರೆಸಿದ್ದಾರೆ ಎಂದು ತಿಳಿದಿಲ್ಲ ಎಂದರು.

ಬೆಂಗಳೂರಿನಲ್ಲಿ ರಸ್ತೆಗಳು ಹಾಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಎಲ್ಲ ರಸ್ತೆಗಳನ್ನೂ ಡಾಂಬರೀಕರಣ ಮಾಡಬೇಕಿದೆ. ಗುಂಡಿ ಮುಚ್ಚಿ ಎನ್ನುವ ಬದಲು ಇಡೀ ರಸ್ತೆಯನ್ನು ದುರಸ್ತಿ ಮಾಡಬೇಕಿದೆ. 25 ಕೋಟಿ ರೂ. ಕೊಟ್ಟಿದ್ದೇನೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅದು ಬಿಬಿಎಂಪಿಗೆ ಬಂದು ಟೆಂಡರ್‌ ಆಗುವ ವೇಳೆಗೆ ಇನ್ನೂ ಒಂದು ವರ್ಷ ಆಗಲಿದೆ. ಆಗ ಮತ್ತೆ ಮಳೆ ಬಂದು ಗುಂಡಿ ಹೆಚ್ಚಲಿದೆ. ಜನರ ಕಣ್ಣು ಒರೆಸಲು ಈ ರೀತಿ ಹೇಳಿಕೆ ನೀಡುವುದು ಬೇಡ. ಇಡೀ ನಗರದಲ್ಲಿ ಸುಮಾರು 5 ಲಕ್ಷ ಗುಂಡಿಗಳಿವೆ. ಡಾಂಬರು ಹಾಕಿದ ಒಂದೇ ಗಂಟೆಯಲ್ಲಿ ಕಿತ್ತುಹೋಗುತ್ತದೆ. ಗುಂಡಿ ಮುಚ್ಚುವ ಬದಲು ರಸ್ತೆಯನ್ನು ಡಾಂಬರೀಕರಣ ಮಾಡುವುದು ಸೂಕ್ತ ಎಂದರು.

ಆಂದೋಲನ ಡೆಸ್ಕ್

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

30 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago