ರಾಜ್ಯ

ಸಿದ್ದರಾಮಯ್ಯಗೆ outgoing cm ಎಂದ ಆರ್‌.ಅಶೋಕ್‌

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್ ಆಶೋಕ್, ಸಿಎಂ ಸಿದ್ದರಾಮಯ್ಯರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಡಿಸಿ, ಸಿಇಒಗಳ ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಯಂತ್ರ ಹೇಗೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ? ಇದು ತಾವು ನಿರ್ಗಮಿತ ಸಿಎಂ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಂಪುಟ ವಿಸ್ತರಣೆ/ಪುನರ್‌ರಚನೆ ಯಾಕೆ ಎಂದು ಸುಮ್ಮನಿದ್ದಾರೋ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲಾ, ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ ಎಂದು ಸವಾಲು ಎಸೆದಿದ್ದಾರೆ.

ಮನೆಯ ಯಜಮಾನ ಸರಿ ಇಲ್ಲದೆ ಹೋದರೆ ಹೇಗೆ ಸಂಸಾರ ಬೀದಿಗೆ ಬರುತ್ತದೋ ಅದೇ ರೀತಿ ಒಂದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಹಿಡಿತ ಇಲ್ಲದೆ ಹೋದರೆ ಆಡಳಿತ ಯಂತ್ರ ಹಳ್ಳ ಹಿಡಿಯುತ್ತದೆ. ಮುಖ್ಯಮಂತ್ರಿ ಮಾತಿಗೆ ಸಚಿವರೇ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಆಡಳಿತಶಾಹಿಯಲ್ಲಿ ಗೊಂದಲ ಮೂಡಿಸುತ್ತದೆ ಎಂದು ಟೀಕಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

5 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

7 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

8 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

8 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

9 hours ago