congress
ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್ ಆಶೋಕ್, ಸಿಎಂ ಸಿದ್ದರಾಮಯ್ಯರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಡಿಸಿ, ಸಿಇಒಗಳ ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಸುದ್ದಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಯಂತ್ರ ಹೇಗೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇಷ್ಟಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂಬ ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ? ಇದು ತಾವು ನಿರ್ಗಮಿತ ಸಿಎಂ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಂಪುಟ ವಿಸ್ತರಣೆ/ಪುನರ್ರಚನೆ ಯಾಕೆ ಎಂದು ಸುಮ್ಮನಿದ್ದಾರೋ? ಎಂದು ಪ್ರಶ್ನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲಾ, ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ ಎಂದು ಸವಾಲು ಎಸೆದಿದ್ದಾರೆ.
ಮನೆಯ ಯಜಮಾನ ಸರಿ ಇಲ್ಲದೆ ಹೋದರೆ ಹೇಗೆ ಸಂಸಾರ ಬೀದಿಗೆ ಬರುತ್ತದೋ ಅದೇ ರೀತಿ ಒಂದು ಸರ್ಕಾರದಲ್ಲಿ ಮುಖ್ಯಮಂತ್ರಿಗೆ ಹಿಡಿತ ಇಲ್ಲದೆ ಹೋದರೆ ಆಡಳಿತ ಯಂತ್ರ ಹಳ್ಳ ಹಿಡಿಯುತ್ತದೆ. ಮುಖ್ಯಮಂತ್ರಿ ಮಾತಿಗೆ ಸಚಿವರೇ ಕಿಮ್ಮತ್ತು ಕೊಡುತ್ತಿಲ್ಲ ಎಂದರೆ ಆಡಳಿತಶಾಹಿಯಲ್ಲಿ ಗೊಂದಲ ಮೂಡಿಸುತ್ತದೆ ಎಂದು ಟೀಕಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…