ರಾಜ್ಯ

ಸಿಎಂ ವಿರುದ್ಧದ ತನಿಖೆ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್‌ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.

ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.

ಕಾಂಗ್ರೆಸ್‌ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.

ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

33 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

57 mins ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

3 hours ago