ರಾಜ್ಯ

ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿ ಮಾಡಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್‌ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬೌಲರ್‌ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ. 11 ಪ್ರತಿಭಾವಂತ ಯುವ ಜನರು ಬಲಿಯಾಗಿದ್ದಾರೆ ಎಂದು ದೂರಿದರು.

ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

30 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

1 hour ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago