ರಾಜ್ಯ

ಅಬಕಾರಿ ಇಲಾಖೆ| ವರ್ಗಾವಣೆಗೆ ಹೊಸ ನಿಯಮ ಜಾರಿ: ಆರ್‌.ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ಹಿನ್ನೆಲೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡು ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ನಿಯಮಗಳನ್ನು ಮಾರ್ಪಾಡುವ ಮಾಡುವ ಸಲುವಾಗಿ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ಧತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ(ಜ.16) ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು-2025 ಅನುಮೋದನೆ ನೀಡಲಾಗಿದೆ. ಈ ನಿಯಮಗಳ ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಲಾಗುವುದು. ಅಲ್ಲದೇ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮ- 2025 ಅನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಹಾಗೂ ಕಾರ್ಯ ನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ತೀರ್ಮಾನಿಸಲಾಗಿದೆ. ಒಂದು ಅಧಿಕಾರಿ ಅಥವಾ ಸಿಬ್ಬಂದಿಯನ್ನು ನಿರತಂತರವಾಗಿ ಎರಡಕ್ಕಿಂತ ಅಧಿಕ ಅವಧಿಗೆ ಕಾರ್ಯ ನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ. ಇನ್ನೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಈ ಇಲಾಖೆಯೂ ಸಮವಸ್ತ್ರಾಧಾರಿತ ಹಾಗೂ ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮಗಳು ಇಲಾಖೆಯಲ್ಲಿನ ಜಾರಿಗೆ ಹಾಗೂ ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಅಲ್ಲದೇ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ಜೊತೆಗೆ ಸರ್ಕಾರಕ್ಕೆ ಆದಾಯ ಸಹ ಅಧಿಕವಾಗಲಿದೆ ಎಂದರು.

ಇನ್ನೂ ಕಳೆದ ಐದು ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago