ರಾಜ್ಯ

ರಾಜ್ಯದಲ್ಲಿ ದರ ಏರಿಕೆ| ಅರ್ಥಶಾಸ್ತ್ರ ತಿಳಿದೋರು ಬೆಲೆ ಏರಿಕೆ ವಿರೋಧಿಸಲ್ಲ: ಆರ್‌.ವಿ.ದೇಶಪಾಂಡೆ

ಬೆಂಗಳೂರು: ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ರಾಜ್ಯದಲ್ಲಿ ಬೆಲೆ ಏರರಿಕೆಯನ್ನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪಿಲ್‌.2) ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷ ಬೆಲೆ ಏರಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮಾಡುತ್ತಿರುವುದು ಅವರ ಇಚ್ಛೆ. ಆದರೆ ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ. ಏಕೆಂದರೆ ರಾಜ್ಯದಲ್ಲಿ ಬಿಎಪಿ ಸರ್ಕಾರ ಅಧಿಕಾದಲ್ಲಿದ್ದಾಗ ಬೆಲೆ ಏರಿಕೆ ಮಾಡಿರಲಿಲ್ವಾ? ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಹಾಲಿನ ದರವನ್ನು 4 ರೂ.ಗೆ ಹೆಚ್ಚಳ ಮಾಡಿದೆ. ಈ ಬೆಲೆ ಅಧಿಕವಾಗಲು ಕಾರಣ ಮೇವಿನ ಬೆಲೆ ಹೆಚ್ಚಾಗಿರುವುದು. ಸರ್ಕಾರಗಳು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದು ನಿಜವೇ. ಬೆಲೆ ಏರಿಸಿದಾಗ ಸ್ವಲ್ಪ ಅಡ್ಜೆಸ್ಟ್‌ ಮಾಡಿಕೊಳ್ಳಬೇಕು. ಆದರೆ ರಾಜ್ಯದ ಜನತೆಯ ಹಣವನ್ನು ಸರ್ಕಾರ ಲೂಟಿ ಮಾಡುತ್ತಿದೆ ಎಂದು ಹೇಳುವುದು ಸರಿಯಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ, ಸಾರ್ವಜನಿಕರಿಗೆ ತೊಂದರೆ ನೀಡಲು ಬೆಲೆ ಏರಿಕೆ ಮಾಡಿಲ್ಲ. ನಮ್ಮ ಸರ್ಕಾರ ಯಾವಾಗ ಏನೇ ಮಾಡಿದರೂ ನ್ಯಾಯ ಬದ್ಧವಾಗಿಯೇ ಮಾಡುತ್ತದೆ. ಇನ್ನು ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತಿದೆ. ಅಂತೆಯೇ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದರು.

ಇನ್ನು ಕೇಂದ್ರ ಸರ್ಕಾರವೇ ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆಯನ್ನು ಏರಿಕೆ ಮಾಡಿದೆ. ದೇಶದಲ್ಲಿ ಕೆಲವೊಂದು ಬಾರಿ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗುತ್ತದೆ. ಅಲ್ಲದೇ ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ಬೆಲೆ ಏರಿಕೆಯನ್ನು ವಿರೋಧಿಸುವುದಿಲ್ಲ. ನಾನು ಹೇಳುತ್ತಿರುವುದು ಸುಳ್ಳಲ್ಲ, ಇದೇ ರಿಯಾಲಿಟಿ. ಇದನ್ನು ಅರ್ಥ ಮಾಡಿಕೊಂಡವರು ಯಾರು ಕೂಡ ನೀತಿ ಪಾಠ ಭೋದನೆ ಮಾಡುವುದಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 hour ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago