ರಾಜ್ಯ

ರಾಜ್ಯದಲ್ಲಿ ದರ ಏರಿಕೆ| ಅರ್ಥಶಾಸ್ತ್ರ ತಿಳಿದೋರು ಬೆಲೆ ಏರಿಕೆ ವಿರೋಧಿಸಲ್ಲ: ಆರ್‌.ವಿ.ದೇಶಪಾಂಡೆ

ಬೆಂಗಳೂರು: ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ರಾಜ್ಯದಲ್ಲಿ ಬೆಲೆ ಏರರಿಕೆಯನ್ನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪಿಲ್‌.2) ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷ ಬೆಲೆ ಏರಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮಾಡುತ್ತಿರುವುದು ಅವರ ಇಚ್ಛೆ. ಆದರೆ ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ. ಏಕೆಂದರೆ ರಾಜ್ಯದಲ್ಲಿ ಬಿಎಪಿ ಸರ್ಕಾರ ಅಧಿಕಾದಲ್ಲಿದ್ದಾಗ ಬೆಲೆ ಏರಿಕೆ ಮಾಡಿರಲಿಲ್ವಾ? ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಹಾಲಿನ ದರವನ್ನು 4 ರೂ.ಗೆ ಹೆಚ್ಚಳ ಮಾಡಿದೆ. ಈ ಬೆಲೆ ಅಧಿಕವಾಗಲು ಕಾರಣ ಮೇವಿನ ಬೆಲೆ ಹೆಚ್ಚಾಗಿರುವುದು. ಸರ್ಕಾರಗಳು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದು ನಿಜವೇ. ಬೆಲೆ ಏರಿಸಿದಾಗ ಸ್ವಲ್ಪ ಅಡ್ಜೆಸ್ಟ್‌ ಮಾಡಿಕೊಳ್ಳಬೇಕು. ಆದರೆ ರಾಜ್ಯದ ಜನತೆಯ ಹಣವನ್ನು ಸರ್ಕಾರ ಲೂಟಿ ಮಾಡುತ್ತಿದೆ ಎಂದು ಹೇಳುವುದು ಸರಿಯಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ, ಸಾರ್ವಜನಿಕರಿಗೆ ತೊಂದರೆ ನೀಡಲು ಬೆಲೆ ಏರಿಕೆ ಮಾಡಿಲ್ಲ. ನಮ್ಮ ಸರ್ಕಾರ ಯಾವಾಗ ಏನೇ ಮಾಡಿದರೂ ನ್ಯಾಯ ಬದ್ಧವಾಗಿಯೇ ಮಾಡುತ್ತದೆ. ಇನ್ನು ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತಿದೆ. ಅಂತೆಯೇ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದರು.

ಇನ್ನು ಕೇಂದ್ರ ಸರ್ಕಾರವೇ ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆಯನ್ನು ಏರಿಕೆ ಮಾಡಿದೆ. ದೇಶದಲ್ಲಿ ಕೆಲವೊಂದು ಬಾರಿ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗುತ್ತದೆ. ಅಲ್ಲದೇ ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ಬೆಲೆ ಏರಿಕೆಯನ್ನು ವಿರೋಧಿಸುವುದಿಲ್ಲ. ನಾನು ಹೇಳುತ್ತಿರುವುದು ಸುಳ್ಳಲ್ಲ, ಇದೇ ರಿಯಾಲಿಟಿ. ಇದನ್ನು ಅರ್ಥ ಮಾಡಿಕೊಂಡವರು ಯಾರು ಕೂಡ ನೀತಿ ಪಾಠ ಭೋದನೆ ಮಾಡುವುದಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

1 hour ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago