ರಾಜ್ಯ

ಕೃಷ್ಣ ನದಿಯಲ್ಲಿ ತೆಪ್ಪ ಮುಗುಚಿ 6 ಮಂದಿ ನೀರುಪಾಲು

ವಿಜಯಪುರ: ಇಸ್ಪೀಟ್‌ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಇಂದು(ಜು.2) ಸಂಜೆ ದಾಳಿ ನಡೆಸಿದ್ದು, ದಾಳೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲಿದ್ದ ನದಿಯಲ್ಲಿ ತೆಪ್ಪ ಏರಿ ಹೊರಟ 6 ಮಂದಿ ನೀರುಪಾಲಾದ ಘಟನೆ ಕೃಷ್ಣ ನದಿ ತೀರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಿವಾಸಿಗಳಾದ ಮಹಿಬಾಬ್‌ ವಾಲಿಕಾರ(30) ತಯ್ಯಬ್‌ ಚೌಧರಿ(42) ರಫೀಕ್‌ ಜಾಲಗಾರ(55) ಪುಂಡಲೀಕ ಮಲ್ಲಪ್ಪ ಯಂಕಂಚಿ(36) ಧಶರಥ ಗೌಡ(66) ನೀರುಪಾಲಾಗಿ ಸಾವಿಗೀಡಾದವರು. ಸಾವಿಗೀಡಾದ ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಾಹಾಯದೊಂದಿಗೆ ಶವಗಳ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ವಿಷಯ ತಿಳಿದು ಎಸ್ಪಿ ಹಾಗೂ ಎಎಸ್‌ಪಿ ಸ್ಥಳಕ್ಕೆ ದೌಡಯಿಲಿ ಪರಿಶೀಲನೆ ನಡೆಸಿದ್ದಾರೆ.

ಆರೇಳು ಮಂದಿ ಗುಂಪೊಂದು ಕೃಷ್ಣ ನದಿ ತೀರದಲ್ಲಿ ಇಸ್ಪೀಟ್‌ ಆಡುತ್ತಿರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳು ಆರೋಪಿಗಳು ಪಕ್ಕದಲ್ಲಿದ್ದ ತೆಪ್ಪ ಏರಿದ್ದಾರೆ. ಆದರೆ, ನದಿಯಲ್ಲಿ ಸ್ಪಲ್ಪ ದೂರ ಹೋಗುತ್ತಿದ್ದಂತೆ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿಕೊಂಡು ದಡ ಸೇರಿದ್ದಾರೆ.

ಒಟ್ಟಿನಲ್ಲಿ ಇಸ್ಪೀಟ್‌ ಆಡಲು ಹೋದವರು ದುರಂತ ಅಂತ್ಯ ಕಂಡಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಸೆರೆಗೆ ಡ್ರೋನ್ ಕಾರ್ಯಾಚರಣೆ

ಕೆ.ಬಿ.ರಮೇಶನಾಯಕ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್ ಮಾರಾಟ, ಸೇವನೆಯನ್ನು ಬುಡಸಮೇತ ಕಿತ್ತು ಹಾಕುವುದರ ಜತೆಗೆ, ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯದ ಮೇಲೆ…

1 min ago

1.65 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಬೆಳಕು

ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…

5 mins ago

‘ನಾನು ಬೆಳೆಸಿದ ಕಾಡಿನಲ್ಲಿ ನನಗೆ ವಾಸಕ್ಕೆ ಜಾಗ ಇಲ್ವಾ?’

ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…

11 mins ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

10 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago