ವಿಜಯಪುರ: ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಇಂದು(ಜು.2) ಸಂಜೆ ದಾಳಿ ನಡೆಸಿದ್ದು, ದಾಳೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲಿದ್ದ ನದಿಯಲ್ಲಿ ತೆಪ್ಪ ಏರಿ ಹೊರಟ 6 ಮಂದಿ ನೀರುಪಾಲಾದ ಘಟನೆ ಕೃಷ್ಣ ನದಿ ತೀರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಿವಾಸಿಗಳಾದ ಮಹಿಬಾಬ್ ವಾಲಿಕಾರ(30) ತಯ್ಯಬ್ ಚೌಧರಿ(42) ರಫೀಕ್ ಜಾಲಗಾರ(55) ಪುಂಡಲೀಕ ಮಲ್ಲಪ್ಪ ಯಂಕಂಚಿ(36) ಧಶರಥ ಗೌಡ(66) ನೀರುಪಾಲಾಗಿ ಸಾವಿಗೀಡಾದವರು. ಸಾವಿಗೀಡಾದ ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಾಹಾಯದೊಂದಿಗೆ ಶವಗಳ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ವಿಷಯ ತಿಳಿದು ಎಸ್ಪಿ ಹಾಗೂ ಎಎಸ್ಪಿ ಸ್ಥಳಕ್ಕೆ ದೌಡಯಿಲಿ ಪರಿಶೀಲನೆ ನಡೆಸಿದ್ದಾರೆ.
ಆರೇಳು ಮಂದಿ ಗುಂಪೊಂದು ಕೃಷ್ಣ ನದಿ ತೀರದಲ್ಲಿ ಇಸ್ಪೀಟ್ ಆಡುತ್ತಿರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳು ಆರೋಪಿಗಳು ಪಕ್ಕದಲ್ಲಿದ್ದ ತೆಪ್ಪ ಏರಿದ್ದಾರೆ. ಆದರೆ, ನದಿಯಲ್ಲಿ ಸ್ಪಲ್ಪ ದೂರ ಹೋಗುತ್ತಿದ್ದಂತೆ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿಕೊಂಡು ದಡ ಸೇರಿದ್ದಾರೆ.
ಒಟ್ಟಿನಲ್ಲಿ ಇಸ್ಪೀಟ್ ಆಡಲು ಹೋದವರು ದುರಂತ ಅಂತ್ಯ ಕಂಡಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಕೆ.ಬಿ.ರಮೇಶನಾಯಕ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್ ಮಾರಾಟ, ಸೇವನೆಯನ್ನು ಬುಡಸಮೇತ ಕಿತ್ತು ಹಾಕುವುದರ ಜತೆಗೆ, ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯದ ಮೇಲೆ…
ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…
ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…