ರಾಜ್ಯ

ಕೃಷ್ಣ ನದಿಯಲ್ಲಿ ತೆಪ್ಪ ಮುಗುಚಿ 6 ಮಂದಿ ನೀರುಪಾಲು

ವಿಜಯಪುರ: ಇಸ್ಪೀಟ್‌ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಇಂದು(ಜು.2) ಸಂಜೆ ದಾಳಿ ನಡೆಸಿದ್ದು, ದಾಳೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಪಕ್ಕದಲ್ಲಿದ್ದ ನದಿಯಲ್ಲಿ ತೆಪ್ಪ ಏರಿ ಹೊರಟ 6 ಮಂದಿ ನೀರುಪಾಲಾದ ಘಟನೆ ಕೃಷ್ಣ ನದಿ ತೀರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಿವಾಸಿಗಳಾದ ಮಹಿಬಾಬ್‌ ವಾಲಿಕಾರ(30) ತಯ್ಯಬ್‌ ಚೌಧರಿ(42) ರಫೀಕ್‌ ಜಾಲಗಾರ(55) ಪುಂಡಲೀಕ ಮಲ್ಲಪ್ಪ ಯಂಕಂಚಿ(36) ಧಶರಥ ಗೌಡ(66) ನೀರುಪಾಲಾಗಿ ಸಾವಿಗೀಡಾದವರು. ಸಾವಿಗೀಡಾದ ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಾಹಾಯದೊಂದಿಗೆ ಶವಗಳ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ವಿಷಯ ತಿಳಿದು ಎಸ್ಪಿ ಹಾಗೂ ಎಎಸ್‌ಪಿ ಸ್ಥಳಕ್ಕೆ ದೌಡಯಿಲಿ ಪರಿಶೀಲನೆ ನಡೆಸಿದ್ದಾರೆ.

ಆರೇಳು ಮಂದಿ ಗುಂಪೊಂದು ಕೃಷ್ಣ ನದಿ ತೀರದಲ್ಲಿ ಇಸ್ಪೀಟ್‌ ಆಡುತ್ತಿರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳು ಆರೋಪಿಗಳು ಪಕ್ಕದಲ್ಲಿದ್ದ ತೆಪ್ಪ ಏರಿದ್ದಾರೆ. ಆದರೆ, ನದಿಯಲ್ಲಿ ಸ್ಪಲ್ಪ ದೂರ ಹೋಗುತ್ತಿದ್ದಂತೆ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿಕೊಂಡು ದಡ ಸೇರಿದ್ದಾರೆ.

ಒಟ್ಟಿನಲ್ಲಿ ಇಸ್ಪೀಟ್‌ ಆಡಲು ಹೋದವರು ದುರಂತ ಅಂತ್ಯ ಕಂಡಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

28 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

30 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

33 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

35 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

38 mins ago