ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್ವೆಸ್ಟ್ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಗೈರಾಗಿದ್ದಾರೆ.
ಈ ಬಗ್ಗೆ ಲೇವಡಿ ಮಾಡಿರುವ ಆರ್.ಅಶೋಕ್ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಸಲವೂ ಶೂನ್ಯ ಸಾಧನೆ ಮಾಡಿ ಅವಮಾನಗೊಂಡಿರುವುದಕ್ಕೆ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರಲು ಮುಜುಗರ ಪಡುತ್ತಿದ್ದಾರೆಯೇ? ಅಥವಾ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಗುಂಪುಗಾರಿಕೆಯನ್ನು ಎದುರಿಸಲು ರಾಹುಲ್ ಹೆದರುತ್ತಿದ್ದಾರೆಯೇ ಎಂದು ಲೇವಡಿ ಮಾಡಿದ್ದಾರೆ.
ಡಿಸಿಎಂ ಡಿಕೆಶಿ ಅವರಿಗಿಂತ ಗಾಂಧಿ ಕುಟುಂಬದವರು ಯಾವಾಗಲೂ ಸಿಎಂ ಸಿದ್ದರಾಮಯ್ಯ ಅವರತ್ತ ಒಲವು ತೋರಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಅದು ಎಲ್ಲರಿಗೂ ತಿಳಿದಿದೆ. ರಾಹುಲ್ ಗಾಂಧಿ ಹಾಗೂ ಡಿಕೆಶಿ ಒಬ್ಬರನ್ನೊಬ್ಬರು ನೋಡುತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.
ನವದೆಹಲಿ: ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ…
ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ…
ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ…
ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ…