rahul gandhi
ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ಆಯೋಜಿಸಲಾಗಿತ್ತು.
ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ತರಲು ಆಗಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. ಆದರೆ ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದು ಭರವಸೆಯನ್ನು ಈಡೇರಿಸಿದ್ದೇವೆ ಎಂದರು.
1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ. ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಮಹಿಳೆಯರು ಫ್ರೀಯಾಗಿ ಬಸ್ನಲ್ಲಿ ಓಡಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಬಿಜೆಪಿಯವರು ಎರಡರಿಂದ ಮೂರು ಮಂದಿ ಕೋಟ್ಯಾಧಿಪತಿಗಳ ಪರ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…