rahul gandhi
ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ಆಯೋಜಿಸಲಾಗಿತ್ತು.
ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ತರಲು ಆಗಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. ಆದರೆ ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದು ಭರವಸೆಯನ್ನು ಈಡೇರಿಸಿದ್ದೇವೆ ಎಂದರು.
1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ. ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಮಹಿಳೆಯರು ಫ್ರೀಯಾಗಿ ಬಸ್ನಲ್ಲಿ ಓಡಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಬಿಜೆಪಿಯವರು ಎರಡರಿಂದ ಮೂರು ಮಂದಿ ಕೋಟ್ಯಾಧಿಪತಿಗಳ ಪರ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…