Mysore
30
few clouds

Social Media

ಶನಿವಾರ, 28 ಮಾರ್ಚ್ 2026
Light
Dark

ಹಿಂದುಗಳ ಅವಹೇಳನ: ರಾಹುಲ್‌ ಗಾಂಧಿ ಕ್ಷಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್‌ ಗಾಂಧಿ ಲೋಕಸಭಾ ಚುನಾವಣೆ ವೇಳೆಯೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ದೇಶಾದ್ಯಂತ ಪ್ರವಾಸ ಮಾಡಿದ್ದರು.

ಈಗ ವಿಪಕ್ಷ ನಾಯಕನಾಗಿ ಹಳೇ ಚಾಳಿ ಮುಂದುವರಿಸಿದ್ದು, ಸಂಸದರಾದ ಅವರು ತಮ್ಮ ಸ್ಥಾನದ ಘನತೆ ಎತ್ತಿ ಹಿಡಿಯುವ ಬದಲಾಗಿ ಆ ಸ್ಥಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ಹಿಂದುಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತನ್ನು ಹೇಳುವ ಮೂಲಕ ಅವರು ಈ ದೇಶದ ಅಸಂಖ್ಯಾತ ಹಿಂದುಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಹಿಂದುಗಳ ತೇಜೋವಧೆ ಮಾಡಿದ್ದಾರೆ. ಅಷ್ಟೇ ಸಾಲದೆಂದು ಅಗ್ನಿವೀರ್‌, ರೈತರ ಬಗ್ಗೆ, ಅಯೋಧ್ಯೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇವೆಲ್ಲಾ ವಿಚಾರಗಳಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೇ, ಹಿಂದುಗಳ ತೇಜೋವಧೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.

ಈ ಎಲ್ಲಾ ಮಾತುಗಳನ್ನು ಆಡಿರುವ ರಾಹುಲ್‌ ಗಾಂಧಿ ಅವರು ಕೂಡಲೇ ಹಿಂದುಗಳ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಹುಲ್‌ ಗಾಂಧಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.

 

Tags:
error: Content is protected !!