ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ವೇಳೆಯೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ದೇಶಾದ್ಯಂತ ಪ್ರವಾಸ ಮಾಡಿದ್ದರು.
ಈಗ ವಿಪಕ್ಷ ನಾಯಕನಾಗಿ ಹಳೇ ಚಾಳಿ ಮುಂದುವರಿಸಿದ್ದು, ಸಂಸದರಾದ ಅವರು ತಮ್ಮ ಸ್ಥಾನದ ಘನತೆ ಎತ್ತಿ ಹಿಡಿಯುವ ಬದಲಾಗಿ ಆ ಸ್ಥಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಿಂದುಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತನ್ನು ಹೇಳುವ ಮೂಲಕ ಅವರು ಈ ದೇಶದ ಅಸಂಖ್ಯಾತ ಹಿಂದುಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಹಿಂದುಗಳ ತೇಜೋವಧೆ ಮಾಡಿದ್ದಾರೆ. ಅಷ್ಟೇ ಸಾಲದೆಂದು ಅಗ್ನಿವೀರ್, ರೈತರ ಬಗ್ಗೆ, ಅಯೋಧ್ಯೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇವೆಲ್ಲಾ ವಿಚಾರಗಳಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೇ, ಹಿಂದುಗಳ ತೇಜೋವಧೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.
ಈ ಎಲ್ಲಾ ಮಾತುಗಳನ್ನು ಆಡಿರುವ ರಾಹುಲ್ ಗಾಂಧಿ ಅವರು ಕೂಡಲೇ ಹಿಂದುಗಳ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…