ಬೆಂಗಳೂರು: ಹಿಂದುಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದುಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ವೇಳೆಯೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ದೇಶಾದ್ಯಂತ ಪ್ರವಾಸ ಮಾಡಿದ್ದರು.
ಈಗ ವಿಪಕ್ಷ ನಾಯಕನಾಗಿ ಹಳೇ ಚಾಳಿ ಮುಂದುವರಿಸಿದ್ದು, ಸಂಸದರಾದ ಅವರು ತಮ್ಮ ಸ್ಥಾನದ ಘನತೆ ಎತ್ತಿ ಹಿಡಿಯುವ ಬದಲಾಗಿ ಆ ಸ್ಥಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಿಂದುಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತನ್ನು ಹೇಳುವ ಮೂಲಕ ಅವರು ಈ ದೇಶದ ಅಸಂಖ್ಯಾತ ಹಿಂದುಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಹಿಂದುಗಳ ತೇಜೋವಧೆ ಮಾಡಿದ್ದಾರೆ. ಅಷ್ಟೇ ಸಾಲದೆಂದು ಅಗ್ನಿವೀರ್, ರೈತರ ಬಗ್ಗೆ, ಅಯೋಧ್ಯೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇವೆಲ್ಲಾ ವಿಚಾರಗಳಲ್ಲಿ ಸುಳ್ಳು ಹೇಳಿಕೆ ನೀಡಿದ್ದಲ್ಲದೇ, ಹಿಂದುಗಳ ತೇಜೋವಧೆ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.
ಈ ಎಲ್ಲಾ ಮಾತುಗಳನ್ನು ಆಡಿರುವ ರಾಹುಲ್ ಗಾಂಧಿ ಅವರು ಕೂಡಲೇ ಹಿಂದುಗಳ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…