ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದ 15ನೇ ವಿಧಾನಸಭೆಯ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿ ಸತತ ಎರಡನೇ ಬಾರಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ.
1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಹೊರತುಪಡಿಸಿ, ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು 2ನೇ ಬಾರಿಗೆ ಸಭಾಪತಿಯಾಗಿ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮಾತನಾಡಿ, 1960ರಲ್ಲಿ ರಾಜ್ಯ ಪುನರ್ ವಿಂಗಡಣೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಬಿಟ್ಟರೆ ಸತತ 2ನೇ ಬಾರಿಗೆ ವಿಧಾನಸಭಾ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…