ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದ 15ನೇ ವಿಧಾನಸಭೆಯ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿ ಸತತ ಎರಡನೇ ಬಾರಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ.
1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಹೊರತುಪಡಿಸಿ, ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು 2ನೇ ಬಾರಿಗೆ ಸಭಾಪತಿಯಾಗಿ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮಾತನಾಡಿ, 1960ರಲ್ಲಿ ರಾಜ್ಯ ಪುನರ್ ವಿಂಗಡಣೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಬಿಟ್ಟರೆ ಸತತ 2ನೇ ಬಾರಿಗೆ ವಿಧಾನಸಭಾ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…