ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದ 15ನೇ ವಿಧಾನಸಭೆಯ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿ ಸತತ ಎರಡನೇ ಬಾರಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ.
1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಹೊರತುಪಡಿಸಿ, ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು 2ನೇ ಬಾರಿಗೆ ಸಭಾಪತಿಯಾಗಿ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮಾತನಾಡಿ, 1960ರಲ್ಲಿ ರಾಜ್ಯ ಪುನರ್ ವಿಂಗಡಣೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಬಿಟ್ಟರೆ ಸತತ 2ನೇ ಬಾರಿಗೆ ವಿಧಾನಸಭಾ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…