ರಾಯಚೂರು : ಲಿಂಗಸಗೂರು ತಾಲೂಕಿನ ನೀರಲಕೇರಿ ಗ್ರಾಮದ ನೀರಲಕೇರಿ ಸರಕಾರಿ ಶಾಲೆಯ 150 ಕ್ಕೂ ಹೆಚ್ಚು ಮಕ್ಕಳ ಮಂಗನ ಬಾವು ಕಾಣಿಸಿಕೊಂಡಿದೆ.
ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡಿ, ಇಡೀ ಶಾಲೆಯನ್ನು ಆವರಿಸಿದೆ. ಗಂಟಲು ಭಾಗದಲ್ಲಿ ಬಾವು, ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿದ್ದಾರೆ. ಬಾವು ಇರುವ ಕಡೆ ಅರಿಶಿಣ ಮತ್ತು ಪಟ್ಟಿ ಹಾಕಿ ಪೋಷಕರು ಮನೆ ಮದ್ದು ನೀಡುತ್ತಿದ್ದಾರೆ. ಮಂಗನ ಬಾವು ಕಾಯಿಲೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಗೈರಾಗುತ್ತಿದ್ದಾರೆ. ಸದ್ಯ ಭಾದಿತರಿಗೆ ಆನೆಹೊಸರು, ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಚಾರ ತಿಳಿದು ಗ್ರಾಮದಲ್ಲಿ ಮುಕ್ಕಾಂ ಹೂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮತ್ತು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ರಾಯಚೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ಪೋಷಕರು ಹೆದರುವ ಅವಶ್ಯಕತೆ ಇಲ್ಲ. ಸಾಮಾನ್ಯವಾಗಿ ಬೇಸಿಗೆಯ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಖಾಯಿಲೆ ಬರುತ್ತದೆ. ಮೂರು-ನಾಲ್ಕು ದಿನಗಳಲ್ಲಿ ಬಾವು ವಾಸಿಯಾಗತ್ತೆ. ಸದ್ಯ ಶಾಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…