ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಈ ಹಿಂದೆ ಇಲಾಖೆಗೆ ಎಲ್ಲಾ ಪರೀಕ್ಷೆಗಳಿಗೂ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಬರೆಯಲು ಅವಕಾಶ ನೀಡಲಾಗಿತ್ತು. ಈ ಬೆನ್ನಲ್ಲೇ ಎಲ್ಲಾ ಕಡೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಹೀಗಾಗಿ ಈಗ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ ಎಂದರು.
ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಇಲಾಖೆಗೆ ಸೂಚನೆ ನೀಡಲಾಗಿದೆ. ಕನ್ನಡದಲ್ಲಿಯೂ ಸುತ್ತೋಲೆ ಹೊರಡಿಸಲು ತಿಳಿಸಿದ್ದೇನೆ. ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.
ಇದರಿಂದ ತೀವ್ರ ಸಂತೋಷಗೊಂಡಿರುವ ಕನ್ನಡಿಗರು ಸಚಿವ ವಿ.ಸೋಮಣ್ಣರ ಶ್ರಮಕ್ಕೆ ಜೈಕಾರ ಹಾಕಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…