weather rain alert karnataka
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ : ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, ಕರಾವಳಿ ಭಾಗದ ಈ ಮೂರು ಜಿಲ್ಲೆಗಳಿಗೆ ಒಂದು ವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಮುನ್ಸೂಚನೆ: ಮೈಸೂರು, ಮಂಡ್ಯ, ಕೊಡಗು, ಹಾಸನ, ರಾಮನಗರ, ತುಮಕೂರು, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಎಲ್ಲಿ ಮಳೆ ವರದಿ:ಕೊಡಗು ಜಿಲ್ಲೆಯ ಸೋಮವಾರಪೇಟೆ, ನಾಪೋಕ್ಲು, ಸಿದ್ದಾಪುರ, ಬೆಳ್ತಂಗಡಿ, ಪುತ್ತೂರು, ಮೂಡಿಗೆರೆ, ಸುಳ್ಯ, ಮಂಗಳೂರು, ಕುಮಟಾ, ಕಾರ್ಕಳ, ನಾಪೋಕ್ಲು, ಕೊಟ್ಟಿಗೆಹಾರ, ಕುಂದಾಪುರ, ಬೆಳಗಾವಿ, ಉಡುಪಿ, ಮುಂಡಗೋಡು, ಅರಕಲಗೂಡು, ಆಗುಂಬೆ, ಯಲ್ಲಾಪುರ, ಧರ್ಮಸ್ಥಳ, ಶೃಂಗೇರಿ, ಕೊಪ್ಪ, ಕಳಸ, ಬಾಳೆಹೊನ್ನೂರಿನಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.
ಮತ್ತೊಂದೆಡೆ ಭಾರತೀಯರ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಕೆಲವು ರಾಜ್ಯಗಳಿಗೆ ರೆಡ್ ಅಲಟ್ ಘೋಷಣೆ ಮಾಡಿದೆ. ಕೆಲವು ಕಡೆ ಬಿರುಗಾಳಿ ಸಹಿತ ಮಳೆ ಆಗಲಿದೆ. ಪ್ರವಾಹ, ಗುಡ್ಡ ಕುಸಿತ, ಭೂಕುಸಿತದ ವಾರ್ನಿಂಗ್ ಕೊಟ್ಟಿದ್ದು, ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಎಚ್ಚರಿಕೆ ನೀಡಿದೆ.
ಮುಂದಿನ ದಿನಗಳಲ್ಲಿ ದೇಶಾದ್ಯಂತ ಮಾನ್ಸೂನ್ ಚುರುಕು ಆಗಿರಲಿದೆ. ಪ್ರವಾಹ, ಭೂಕುಸಿತ, ಬೆಳೆ ಹಾನಿ ಮತ್ತು ಮೂಲಸೌಕರ್ಯ ಅಡ್ಡಿ ಅಪಾಯಗಳು ಹೆಚ್ಚಾಗಿವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…