Rain God Varuna Roars Across the State: Reservoirs Reach Full Capacit
ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ.
ಕೆಆರ್ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಭರ್ತಿಯ ಸನಿಹದಲ್ಲಿವೆ.
ಕೆಆರ್ಎಸ್ ಅಣೆಕಟ್ಟಿನಿಂದ ಕಾವೇರಿ ನದಿಗೆ 35 ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡುತ್ತಿದ್ದು, ನದಿಪಾತ್ರದ ಜನತೆ ಎಚ್ಚರಿಕೆಯಿಂದಿರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಸೇರಿ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರವಾಸಿ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆರು ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…