Transparent umbrella under heavy rain against water drops splash background. Rainy weather concept.
ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇಲ್ಮೆ ಸುಳಿ ಗಾಳಿ ಉಂಟಾಗಿರುವ ಪರಿಣಾಮದಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಮತ್ತು ಬುಧವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಂಟಿಗ್ರೇಡ್ ತಲುಪಿದ್ದು, ಕಲಬುರಗಿಯಲ್ಲಿ 39 ಡಿಗ್ರಿ ಸೆಂಟಿಗ್ರೇಡ್ನಷ್ಟು ಇದೆ. ಕೊಪ್ಪಳ, ಹಾವೇರಿ, ಧಾರವಾಡ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲೂ 37 ಡಿಗ್ರಿ ಸೆಂಟಿಗ್ರೇಡ್ಗಿಂತ ಹೆಚ್ಚಿನ ಉಷ್ಣಾಂಶವಿರಲಿದೆ.
ಮಾರ್ಚ್ ತಿಂಗಳಲ್ಲಿ ಅಕಾಲಿಕ ಮಳೆಯಾಗುವುದು ವಾಡಿಕೆ. ಜನವರಿಯಿಂದ ಈ ತನಕ ರಾಜ್ಯದಲ್ಲಿ ಅಕಾಲಿಕ ಮಳೆಯಾಗಿಲ್ಲ. ಹೀಗಾಗಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಮಾರ್ಚ್-ಏಪ್ರಿಲ್, ಮೇ ತಿಂಗಳಿನಲ್ಲಿ ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…