ರಾಜ್ಯ

ಬಿಸಿಲಿನ ನಡುವೆ, ರಾಜ್ಯದ ಈ ಭಾಗದಲ್ಲಿ ಮಳೆ ಮುನ್ಸೂಚನೆ!

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇಲ್ಮೆ ಸುಳಿ ಗಾಳಿ ಉಂಟಾಗಿರುವ ಪರಿಣಾಮದಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ ಮತ್ತು ಬುಧವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಂಟಿಗ್ರೇಡ್ ತಲುಪಿದ್ದು, ಕಲಬುರಗಿಯಲ್ಲಿ 39 ಡಿಗ್ರಿ ಸೆಂಟಿಗ್ರೇಡ್‍ನಷ್ಟು ಇದೆ. ಕೊಪ್ಪಳ, ಹಾವೇರಿ, ಧಾರವಾಡ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲೂ 37 ಡಿಗ್ರಿ ಸೆಂಟಿಗ್ರೇಡ್‍ಗಿಂತ ಹೆಚ್ಚಿನ ಉಷ್ಣಾಂಶವಿರಲಿದೆ.

ಮಾರ್ಚ್ ತಿಂಗಳಲ್ಲಿ ಅಕಾಲಿಕ ಮಳೆಯಾಗುವುದು ವಾಡಿಕೆ. ಜನವರಿಯಿಂದ ಈ ತನಕ ರಾಜ್ಯದಲ್ಲಿ ಅಕಾಲಿಕ ಮಳೆಯಾಗಿಲ್ಲ. ಹೀಗಾಗಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಮಾರ್ಚ್-ಏಪ್ರಿಲ್, ಮೇ ತಿಂಗಳಿನಲ್ಲಿ ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

1 hour ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

1 hour ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

1 hour ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

1 hour ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

1 hour ago