ರಾಜ್ಯ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನ.12ರ ವರೆಗೂ ಮಳೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಧರ್ಮಸ್ಥಳ, ಸೋಮವಾರಪೇಟೆ, ಹುಣಸೂರು, ಸಕಲೇಶಪುರ, ಮಂಗಳೂರು, ಬೆಂಗಳೂರು, ಎಚ್ಎಎಲ್ ವಿಮಾನ ನಿಲ್ದಾಣ, ರಾಮನಗರ, ಬಂಡೀಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಮಡಿಕೇರಿ, ಪುತ್ತೂರು, ಬೆಳ್ತಂಗಡಿ, ಟಿ ನರಸೀಪುರ, ಕಳಸ, ಭಾಗಮಂಡಲ, ಸರಗೂರು, ಕುಣಿಗಲ್, ಗೋಪಾಲ್ ನಗರ, ದೇವನಹಳ್ಳಿ, ಪೊನ್ನಂಪೇಟೆ, ಉಪ್ಪಿನಂಗಡಿ, ಮಾಣಿ, ಮದ್ದೂರು, ರಾಯಲ್ಪಾಡು, ಹೊಸಕೋಟೆ, ದೊಡ್ಡಬಳ್ಳಾಪುರ, ಚಾಮರಾಜನಗರದಲ್ಲಿಯೂ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

 

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago