Mysore
30
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಇಂದು ನಾಳೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿರಲಿದ್ದು, ಮುಂಜಾನೆ ಮಂಜು ಆವರಿಸಿದ ವಾತಾವರಣ ಇರಲಿದೆ. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ‘ತೇಜ್’ ಚಂಡಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿರುವ ಹವಾಮಾನ ಇಲಾಖೆ, ಇಂದು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!