ರಾಜ್ಯ

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳು ಜೀವಂತಗೊಂಡಿವೆ. ಅದರ ನೇರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಜೋಗ್‍ಪಾಲ್ಸ್‌ಗೂ ಮತ್ತೆ ಜೀವಕಳೆ ಮರಳಿದೆ.

ವಿಶೇಷವಾಗಿ ಬೆಳಗಾವಿ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಿರುವುದರಿಂದ ರೈತರು ಮತ್ತು ನೀರಾವರಿ ಅವಲಂಬಿತ ಪ್ರದೇಶಗಳಲ್ಲಿ ನಿರೀಕ್ಷೆಯ ವಾತಾವರಣ ಮೂಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ಮಳೆಯ ಆರ್ಭಟ ಹೀಗೆಯೇ ಮುಂದುವರಿಯಲಿದೆ. ಇದರಿಂದ ಒಳಹರಿವಿನ ಪ್ರಮಾಣ ದುಪ್ಪಟ್ಟಾಗಲಿದ್ದು, ಜಲಾಶಯಗಳು ಮತ್ತಷ್ಟು ಬೇಗ ಭರ್ತಿಯಾಗುವ ನಿರೀಕ್ಷೆಯಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ಅದರ ಉಪನದಿಗಳ ಜಲಪ್ರವಾಹದಲ್ಲಿ ಏರಿಕೆ ಕಂಡುಬರುತ್ತಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ನದಿಗಳಿಗೆ ನೀರಿನ ಹರಿವು ಹೆಚ್ಚಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರಕನ್ನಡ ಭಾಗಗಳಲ್ಲಿ ಇದರ ಪ್ರಭಾವ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಜಲಾಶಯಗಳ ನೀರಿನ ಮಟ್ಟವೂ ನಿಧಾನವಾಗಿ ಏರಿಕೆಯಾಗುತ್ತಿದೆ.

ಬಿತ್ತನೆಗೆ ಕಾಯುತ್ತಿದ್ದ ರೈತರಿಗೆ ಇದು ತುಸು ನಿಟ್ಟುಸಿರು ತಂದಿದ್ದು, ಕೆರೆ-ಕಟ್ಟೆಗಳು ಮತ್ತು ಸಣ್ಣ ಜಲಮೂಲಗಳಲ್ಲೂ ನೀರಿನ ಸಂಗ್ರಹ ಹೆಚ್ಚಾಗುವ ನಿರೀಕ್ಷೆ ಇದೆ. ಜಲಾಶಯಗಳ ಒಳಹರಿವು ಹೆಚ್ಚಾಗುವುದು ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್ ಉತ್ಪಾದನೆ ದೃಷ್ಟಿಯಿಂದಲೂ ಮಹತ್ವದ ಬೆಳವಣಿಗೆಯಾಗಿದೆ.

ಭಾರೀ ಗಾಳಿಗೆ ಮರ ಬಿದ್ದು ಮಲೆನಾಡಿನಾದ್ಯಂತ ತೀವ್ರ ಅನಾಹುತ ಸಂಭವಿಸಿದೆ. ರಸ್ತೆಗೆ ಬೃಹತ್ ಮರಗಳು ಬಿದ್ದು, ಹತ್ತಾರು ಗ್ರಾಮಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ಮಲೆನಾಡ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿದೆ.

ಇನ್ನೊಂದೆಡೆ ಧಾರಾಕಾರ ಮಳೆಯಿಂದ ಮಲೆನಾಡಿನ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೂಡಿಗೆರೆ ತಾಲೂಕಿನ ಕೋಗಿಲೆ ಗ್ರಾಮದ ಹಬ್ಬಿ ಹಳ್ಳ ಮೈದುಂಬಿ ಉಕ್ಕಿ ಹರಿಯುತ್ತಿದ್ದು, ಹಚ್ಚಹಸಿರಿನ ಪ್ರಕೃತಿ, ಮಂಜಿನ ನಡುವೆ ಹರಿಯುವ ಹಳ್ಳಗಳು ಪ್ರವಾಸಿಗರು ಹಾಗೂ ಸ್ಥಳೀಯರ ಗಮನ ಸೆಳೆಯುತ್ತಿವೆ.

 

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

3 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

4 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

6 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

10 hours ago