ರಾಜ್ಯ

ಮಳೆ..ಮಳೆ..ಮಳೆ: ರಾಜ್ಯದಲ್ಲಿ 29 ತಾಲೂಕುಗಳಲ್ಲಿ ಭೂಕುಸಿತದ ಭೀತಿ…!

ಮೈಸೂರು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಸಾವಿನ ಸಂಖ್ಯೆ 270ಕ್ಕೆ ಏರಿದ್ದು, ನಾಪತ್ತೆಯಾದವರ ಹುಡುಕಾಟ ಸಮರೋಪಾದಿಯಲ್ಲಿ ಸಾಗುತ್ತಿದೆ. ಈ ಮಧ್ಯೆ ಇದೇ ರೀತಿಯಲ್ಲಿ ರಾಜ್ಯದ ಮಲೆನಾಡು ಹಾಗೂ ಇತರೆ ಭಾಗಗಳ 29 ತಾಲೂಕಿನ ಹಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿದೆ.

ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಭಾರೀ ಪ್ರಮಾಣದ ಆಪತ್ತು ಎದುರಾಗುವ ಭೀತಿ ಉಂಟಾಗಲಿದೆ.

ಮಳೆಗಾಲ ಸಮಯದಲ್ಲಿನ ಭೂಕುಸಿತ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು 2022ರಲ್ಲಿಭೂಕುಸಿತ ನಿರ್ವಹಣೆಗಾಗಿ ಕ್ರಿಯಾಯೋಜನೆ ರೂಪಿಸಿತ್ತು. ಆದರೆ, ಕ್ರಿಯಾಯೋಜನೆವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಪರಿಣಾಮ 2022ರಲ್ಲೇ ಭಾರೀ ಮಳೆಯಿಂದಾಗಿ ರಾಜ್ಯದ 55 ಕಡೆ ಭೂಕುಸಿತ ಸಂಭವಿಸಿತು. ಈ ಬಾರಿ ಮಳೆಯಿಂದ 16ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಗುಡ್ಡ ಮತ್ತು ಭೂಕುಸಿತ ಉಂಟಾಗಿದೆ. ಅಲ್ಲದೆ, ಭೂಕುಸಿತ ನಿರ್ವಹಣೆಗಾಗಿ ರೂಪಿಸಿದ್ದ ಕ್ರಿಯಾಯೋಜನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ 29 ತಾಲೂಕಿನ ಹಲವೆಡೆ ಭೂಕುಸಿತ ಪ್ರಮಾಣ ಹೆಚ್ಚುವ ಆತಂಕವಿದೆ.

ರಾಜ್ಯದಲ್ಲಿ 13 ವರ್ಷಗಳಲ್ಲಿ 1,272 ಭೂಕುಸಿತ
ರಾಜ್ಯ ವಿಪತ್ತು ಪ್ರಾಧಿಕಾರದ ಮಾಹಿತಿಯಂತೆ 2009ರ ಜನವರಿಯಿಂದ 2021ರ ಡಿಸೆಂಬರ್ ವರೆಗೆ ರಾಜ್ಯದಲ್ಲಿ 1,272 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಅದರಲ್ಲೂ ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಭಾಗದಲ್ಲಿ ಭೂಕುಸಿತದ ಪ್ರಮಾಣ ಹೆಚ್ಚಾಗಿದೆ.

ಭೂಕುಸಿತಕ್ಕೆ ಕಾರಣಗಳು
ಕಡಿದಾದ ಗುಡ್ಡಗಳಲ್ಲಿ ತೆಳುವಾದ ಮಣ್ಣಿನ ಹೊದಿಕೆ, ಇಳಿಜಾರು ಪ್ರದೇಶದ ಭೂ ಸ್ವರೂಪದಲ್ಲಿ ಬದಲಾವಣೆ, ಭಾರೀ ಮಳೆ, ನೈಸರ್ಗಿಕವಾಗಿ ನೀರು ಹರಿಯುವಿಕೆಗೆ ತಡೆ, ಇಳಿಜಾರು ಪ್ರದೇಶದಲ್ಲಿ ಭಾರೀ ಪ್ರಮಾಣದ ನೀರು ಹರಿಯುವುದು, ಅರಣ್ಯ ನಾಶದಿಂದ ಭೂಕುಸಿತ ಸಂಭವಿಸುತ್ತದೆ.

ಭೂಕುಸಿತ ಭೀತಿ ಇರುವ ಜಿಲ್ಲೆ ಹಾಗೂ ತಾಲೂಕುಗಳು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಹೊನ್ನಾವರ, ಕಾರವಾರ, ಕುಮಟಾ, ಶಿರಶಿ,ಸೂಪಾ, ಸಿದ್ದಾಪುರ, ಸೂಪ ಹಾಗೂ ಯಲ್ಲಾಪುರ, ಉಡುಪಿ ಜಿಲ್ಲೆಯ ಹೆಬ್ರಿ, ಬೈಂದೂರು, ಕಾರ್ಕಳ ಹಾಗೂ ಕುಂದಾಪುರ, ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ, ಎನಆರ್‌ ಪುರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಕಡಬ, ಸುಳ್ಯಾ, ಪುತ್ತೂರು ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

22 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago