ರಾಜ್ಯ

ಮಳೆ ಅನಾಹುತ ; ರಕ್ಷಣಾ ಕಾರ್ಯಚರಣೆಗೆ ಜಾಗೃತರಾಗಿರಿ : ಸಿಎಂ ಸೂಚನೆ

ಬೆಂಗಳೂರು : ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ, ಕೃಷಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯ ಹಾಗೂ ಮಳೆ ಬಾಧಿತ ಪ್ರದೇಶಗಳಲ್ಲಿ ಚುರುಕಿನ ರಕ್ಷಣಾ ಕಾರ್ಯಚರಣೆಗಳ ಬಗ್ಗೆ ಜಾಗೃತರಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧ ಸಮೇಳನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಹಾಗೂ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮುಖ್ಯಮಂತ್ರಿಯವರ ಡ್ಯಾಶ್‍ಬೋರ್ಡ್‍ನಲ್ಲಿ ಅಭಿವೃದ್ದಿ ಕಾರ್ಯಗಳ ಸಮಗ್ರ ಮಾಹಿತಿಯನ್ನು ಅನಾವರಣಗೊಳಿಸಲಾಯಿತು. ಇದೇ ವೇಳೆ ಉತ್ತಮ ಕಾರ್ಯ ನಿರ್ವಹಣೆಗಾಗಿ ಕೆಲವು ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಅಭಿನಂದನಾ ಪತ್ರ ನೀಡಿದರು. ಗ್ಯಾರಂಟಿ ಯೋಜನೆಗಳಡಿ 2023ರಿಂದ ಇಲ್ಲಿಯವರೆಗೆ 64,200 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ಇನ್ವೆಸ್ಟ್ ಕರ್ನಾಟಕ ಯೋಜನೆಯಡಿ 6,81,535 ಕೋಟಿ ರೂ.ಗಳ ಬಂಡವಾಳ ಹರಿದುಬಂದಿದೆ. ಕಂದಾಯ ಇಲಾಖೆಯ ನ್ಯಾಯಾಲಯಗಳಲ್ಲಿ 2,13,005 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಜನಸ್ಪಂದನ ಯೋಜನೆಯಡಿ 1,49,706 ಕುಂದುಕೊರತೆಗಳನ್ನು ಬಗೆಹರಿಸಲಾಗಿದೆ.

ಇ-ಸಂಗ್ರಹಣ ಯೋಜನೆಯಡಿ 90,245 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ. ಮಾಹಿತಿ ಹಕ್ಕು ಯೋಜನೆಯಡಿ 1,12,429 ಅರ್ಜಿಗಳು ವಿಲೇವಾರಿಯಾಗಿವೆ. ನೀರಾವರಿ ಯೋಜನೆಯಲ್ಲಿ 17,12,129 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. 8,118.59 ಕೋಟಿ ರೂ.ಗಳನ್ನು ವಿದ್ಯಾರ್ಥಿವೇತನ ರೂಪದಲ್ಲಿ ಪಾವತಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 4,62,90,159 ಫಲಾನುಭವಿಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದಿದ್ದಾರೆ. ಸಕಾಲ ಯೋಜನೆಯಡಿ 3,36,73,153 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ. ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸಲು 4000 ಸೋಲಾರ್ ಪಂಪ್‍ಗಳನ್ನು ಅಳವಡಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣೇಭೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

5 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

5 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

5 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

5 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

5 hours ago