ತಮಿಳುನಾಡು: ರೈತರು ಜಾಗೃತರಾಗಿ ಸಂಘಟಿತ ಹೋರಾಟ ನಡೆಸಬೇಕು. ನಿರ್ಲಕ್ಷ್ಯ ಮಾಡಿದರೆ ರೈತ ಕುಲವೇ ನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ನೀಡಿದರು.
ತಮಿಳುನಾಡಿನಲ್ಲಿ ನಡೆದ ರೈತರಿಗೆ ಚೈತನ್ಯ ತುಂಬಿದ ತಮಿಳುನಾಡು ವ್ಯವಸಾಯ ಸಂಘ ನೇತಾರ ದಿವಂಗತ ನಾರಾಯಣಸ್ವಾಮಿನಾಯ್ಡು ನೆನಪಿನಲ್ಲಿ ಬೃಹತ್ ರೈತ ನಮನ ರ್ಯಾಲಿ ಸಮಾವೇಶ ಉದ್ಘಾಟನೆ ಮಾತನಾಡಿದ ಅವರು, ದೇಶದ ರೈತರ ಹಿತಕ್ಕಾಗಿ ದೆಹಲಿಯ ಸುತ್ತ ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದರು.
ರೈತರ ಹಾಗೂ ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾಲ್ಕು ಸುತ್ತಿನ ಮಾತುಕತೆ ನಡೆಸಿ ಯಾವುದೇ ಕ್ರಮ ಜಾರಿ ಮಾಡಿಲ್ಲ. ಅದಕ್ಕಾಗಿ ಜುಲೈ 8ನೇ ತಾರೀಕು ದೇಶಾದ್ಯಂತ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಸಂಸದರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಎಂದರು.
ಈ ಮೂಲಕ ಮುಂದಿನ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸುವಂತೆ ಸಂಸದರಿಗೆ ಒತ್ತಾಯಿಸಲಾಗುವುದು. ಬಂಡವಾಳ ಶಾಹಿಗಳ ಮರ್ಜಿಗೆ ಸರ್ಕಾರಗಳು ಮಣಿಯುತ್ತಿದ್ದು ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಮಿಳುನಾಡು ವ್ಯವಸಾಯ ಸಂಘದ ಅಧ್ಯಕ್ಷ ರಾಮನಗೌಡರ್ ಮಾತನಾಡಿ, ದೇಶದಲ್ಲಿ ರೈತ ಪರ ಹೋರಾಟ ಮಾಡಿ ತಮ್ಮ ಪ್ರಾಣ ಕಳೆದುಕೊಂಡ ಸಾವಿರಾರು ರೈತರ ಆತ್ಮಕ್ಕೆ ಶಾಂತಿ ಕೊರಲು. ದಿವಂಗತ ನಾರಾಯಣಸ್ವಾಮಿ ನಾಯ್ಡು ರವರ ನೆನಪಿಗಾಗಿ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.
ತೆಲಂಗಾಣ ರಾಜ್ಯದ ಅರಿಸಿನ ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ನರಸಿಂಹನಾಯ್ಡು ಮಾತನಾಡಿ, ಸರ್ಕಾರಗಳು ರೈತರ ಹೆಸರಿನಲ್ಲಿ ಆಡಳಿತ ನಡೆಸುತ್ತಾ ರೈತರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ ಆದ್ದರಿಂದ ರೈತರು ಜಾಗೃತವಾಗಿರಬೇಕು ಎಂದರು.
ಕೃಷ್ಣಗಿರಿಯ ಬಸ್ ನಿಲ್ದಾಣದಿಂದ ಸಮಾವೇಶದ ತನಕ ಬೃಹತ್ ರೈತರ ರಾಲಿ ನಡೆಸಲಾಯಿತು. ರ್ಯಾಲಿಯಲ್ಲಿ ಸಾವಿರಾರು ರೈತರು ಜಯಘೂಷ ಹಾಕುತ ಮೆರವಣಿಗೆಯಲ್ಲಿ ಸಾಗಿದರು. ತಮಿಳುನಾಡಿನ ವಿವಿಧ ಜಿಲ್ಲೆಗಳ ರೈತ ಮುಖಂಡರು ಹಾಗೂ ಕರ್ನಾಟಕದ ಹತ್ತಳ್ಳಿ ದೇವರಾಜ್, ಉಡಿಗಾಲ ರೇವಣ್ಣ, ಸುಂದ್ರಪ್ಪ ಭಾಗವಹಿಸಿದರು.
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…