ರಾಜ್ಯ

ಹುತಾತ್ಮ ರೈತರ ಶಾಂತಿಗಾಗಿ ರೈತ ನಮನ ರ್ಯಾಲಿ

ತಮಿಳುನಾಡು: ರೈತರು ಜಾಗೃತರಾಗಿ ಸಂಘಟಿತ ಹೋರಾಟ ನಡೆಸಬೇಕು. ನಿರ್ಲಕ್ಷ್ಯ ಮಾಡಿದರೆ ರೈತ ಕುಲವೇ ನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ನಡೆದ ರೈತರಿಗೆ ಚೈತನ್ಯ ತುಂಬಿದ ತಮಿಳುನಾಡು ವ್ಯವಸಾಯ ಸಂಘ ನೇತಾರ ದಿವಂಗತ ನಾರಾಯಣಸ್ವಾಮಿನಾಯ್ಡು ನೆನಪಿನಲ್ಲಿ ಬೃಹತ್ ರೈತ ನಮನ ರ್ಯಾಲಿ ಸಮಾವೇಶ ಉದ್ಘಾಟನೆ ಮಾತನಾಡಿದ ಅವರು, ದೇಶದ ರೈತರ ಹಿತಕ್ಕಾಗಿ ದೆಹಲಿಯ ಸುತ್ತ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದರು.

ರೈತರ ಹಾಗೂ ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾಲ್ಕು ಸುತ್ತಿನ ಮಾತುಕತೆ ನಡೆಸಿ ಯಾವುದೇ ಕ್ರಮ ಜಾರಿ ಮಾಡಿಲ್ಲ. ಅದಕ್ಕಾಗಿ ಜುಲೈ 8ನೇ ತಾರೀಕು ದೇಶಾದ್ಯಂತ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಸಂಸದರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಎಂದರು.

ಈ ಮೂಲಕ ಮುಂದಿನ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸುವಂತೆ ಸಂಸದರಿಗೆ ಒತ್ತಾಯಿಸಲಾಗುವುದು. ಬಂಡವಾಳ ಶಾಹಿಗಳ ಮರ್ಜಿಗೆ ಸರ್ಕಾರಗಳು ಮಣಿಯುತ್ತಿದ್ದು ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಮಿಳುನಾಡು ವ್ಯವಸಾಯ ಸಂಘದ ಅಧ್ಯಕ್ಷ ರಾಮನಗೌಡರ್ ಮಾತನಾಡಿ, ದೇಶದಲ್ಲಿ ರೈತ ಪರ ಹೋರಾಟ ಮಾಡಿ ತಮ್ಮ ಪ್ರಾಣ ಕಳೆದುಕೊಂಡ ಸಾವಿರಾರು ರೈತರ ಆತ್ಮಕ್ಕೆ ಶಾಂತಿ ಕೊರಲು. ದಿವಂಗತ ನಾರಾಯಣಸ್ವಾಮಿ ನಾಯ್ಡು ರವರ ನೆನಪಿಗಾಗಿ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.

ತೆಲಂಗಾಣ ರಾಜ್ಯದ ಅರಿಸಿನ ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ನರಸಿಂಹನಾಯ್ಡು ಮಾತನಾಡಿ, ಸರ್ಕಾರಗಳು ರೈತರ ಹೆಸರಿನಲ್ಲಿ ಆಡಳಿತ ನಡೆಸುತ್ತಾ ರೈತರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ ಆದ್ದರಿಂದ ರೈತರು ಜಾಗೃತವಾಗಿರಬೇಕು ಎಂದರು.

ಕೃಷ್ಣಗಿರಿಯ ಬಸ್ ನಿಲ್ದಾಣದಿಂದ ಸಮಾವೇಶದ ತನಕ ಬೃಹತ್ ರೈತರ ರಾಲಿ ನಡೆಸಲಾಯಿತು. ರ್ಯಾಲಿಯಲ್ಲಿ ಸಾವಿರಾರು ರೈತರು ಜಯಘೂಷ ಹಾಕುತ ಮೆರವಣಿಗೆಯಲ್ಲಿ ಸಾಗಿದರು. ತಮಿಳುನಾಡಿನ ವಿವಿಧ ಜಿಲ್ಲೆಗಳ ರೈತ ಮುಖಂಡರು ಹಾಗೂ ಕರ್ನಾಟಕದ ಹತ್ತಳ್ಳಿ ದೇವರಾಜ್, ಉಡಿಗಾಲ ರೇವಣ್ಣ, ಸುಂದ್ರಪ್ಪ ಭಾಗವಹಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

16 hours ago